ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ಸರ್ಕಾರದಿಂದ ಹಾಗೂ ಕೆಲಸ ಮಾಡುವ ಕಂಪನಿಗಳಿಂದ ಕೆಲಸ ಮಾಡುವವರಿಗೆ ಸಾಕಷ್ಟು ಪ್ರಯೋಜನಗಳನ್ನು ನೀಡಲಾಗುತ್ತದೆ ಅದರಂತೆ ಇವತ್ತಿನ ಲೇಖನದಲ್ಲಿ ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ನಿಮ್ಮ ಬ್ಯಾಂಕ್ ಖಾತೆಗೆ ಬರುವಂತಹ ಒಂದು ಯೋಜನೆಯ ಬಗ್ಗೆ ಮಾಹಿತಿಯನ್ನು ತಿಳಿಸಲಾಗುತ್ತಿದೆ.
![Apply for this scheme if you want to get Rs 1000 in your account every month](https://i0.wp.com/suvarnavani.com/wp-content/uploads/2024/05/Apply-for-this-scheme-if-you-want-to-get-Rs-1000-in-your-account-every-month.jpg?resize=300%2C169&ssl=1)
ಸರ್ಕಾರದಿಂದ ಹಾಗೂ ಕೆಲಸ ಮಾಡುವಂತಹ ಕಂಪನಿಗಳಿಂದ ಸಾಮಾನ್ಯವಾಗಿ ಸಂಘಟಿತ ವಲಯದಲ್ಲಿ ಕೆಲಸ ಮಾಡುವವರಿಗೆ ಸಾಕಷ್ಟು ಉಪಯೋಗಗಳು ಇರುತ್ತದೆ ಅಂದರೆ ಪಿಂಚಣಿ ಪಿಎಫ್ ಮೊದಲಾದ ಸೌಲಭ್ಯಗಳನ್ನು ಸಂಘಟಿತ ವಲಯದಲ್ಲಿ ಕೆಲಸ ಮಾಡುವವರಿಗೆ ನೀಡಲಾಗುತ್ತದೆ .
ಆದರೆ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವಂತಹ ಯಾವುದೇ ಕಾರ್ಮಿಕರಿಗೆ ಯಾವುದೇ ರೀತಿಯ ಸೌಲಭ್ಯಗಳು ಇರುವುದಿಲ್ಲ ಅವರ ಕುಟುಂಬಕ್ಕೂ ಕೂಡ ಇದೀಗ ಆರ್ಥಿಕ ಭದ್ರತೆ ಬೇಕು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ಒಂದು ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಶ್ರಮ ಯೋಜನೆಯ ಅಡಿಯಲ್ಲಿ ಇದೀಗ ಸಂಘಟಿತ ವಲಯದ ಕಾರ್ಮಿಕರು ಸರ್ಕಾರದಿಂದ ಆರ್ಥಿಕ ನೆರವನ್ನು ಪಡೆದುಕೊಳ್ಳಬಹುದಾಗಿದೆ.
ಸರ್ಕಾರದಿಂದ ಸಿಗಲಿದೆ ಒಂದು ಸಾವಿರ ರೂಪಾಯಿ :
ಆಸಂಘಟಿತ ವಲಯದಲ್ಲಿ ಕೆಲಸ ಮಾಡುವವರಿಗೆ ಒಂದು ಸಾವಿರ ರೂಪಾಯಿಗಳ ಪ್ರಯೋಜನವನ್ನು ಸರ್ಕಾರದಿಂದ ನೀಡಲಾಗುತ್ತದೆ ಈಗಾಗಲೇ ಈ ಶ್ರಮ ಕಾರ್ಡನ್ನು 11 ಲಕ್ಷಕ್ಕಿಂತ ಹೆಚ್ಚಿನ ಜನರು ಹೊಂದಿದ್ದು ಅದರ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗಲಾರದು.
ಈ ಶ್ರಮ ಕಾರ್ಡನ್ನು 59ಕ್ಕಿಂತ ಕಡಿಮೆ ವಯಸ್ಸಿನ ಯಾವುದೇ ಸಂಘಟಿತ ವಲಯದ ಕಾರ್ಮಿಕರು ಪಡೆದುಕೊಳ್ಳಬಹುದಾಗಿದೆ ಈ ಶ್ರಮ ಕಾರ್ಡನ್ನು ಪಡೆದುಕೊಳ್ಳಬೇಕಾದರೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಕೇಂದ್ರ ಸರ್ಕಾರ ಕಲ್ಪಿಸಿದೆ. ಇದಷ್ಟೇ ಅಲ್ಲದೆ ನಿಮ್ಮ ಬ್ಯಾಂಕ್ ಖಾತೆಗೆ ಈ ಶ್ರಮ ಕಾರ್ಡಿನ ಮೂಲಕ ಒಂದು ಸಾವಿರ ರೂಪಾಯಿಗಳ ಹಣ ಬಂದಿದೆಯ ಇಲ್ಲ ಎಂಬುದನ್ನು ಕೂಡ ಆನ್ಲೈನ್ ಮೂಲಕ ಚೆಕ್ ಮಾಡಿಕೊಳ್ಳಬಹುದು.
ಇದನ್ನು ಓದಿ : ಆಯುಷ್ಮಾನ್ ಕಾರ್ಡ್ ಹೊಸ ಫೀಚರ್ ಲಾಂಚ್!!
ಈ ಶ್ರಮ ಕಾರ್ಡನ ಪ್ರಯೋಜನಗಳು :
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಶ್ರಮ ಕಾರ್ಡ್ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕಾದರೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಈ ಶ್ರಮ ಕಾರ್ಡಿನ ಪ್ರಯೋಜನಗಳನ್ನು ನೋಡುವುದಾದರೆ,
- ಎರಡು ಲಕ್ಷ ರೂಪಾಯಿಗಳವರೆಗೆ ಜೀವವಿಮೆ
- ಒಂದು ಲಕ್ಷ ರೂಪಾಯಿಗಳ ಅಪಘಾತ ವಿಮೆ
- ಅಸಂಘಟಿತ ವಲಯದಲ್ಲಿ ಕೆಲಸ ಮಾಡುವಂತಹ ಕಾರ್ಮಿಕರಿಗೆ ಹಾಗೂ ಅವರ ಕುಟುಂಬಕ್ಕೆ ಆರ್ಥಿಕ
- ಮಕ್ಕಳ ವಿದ್ಯಾಭ್ಯಾಸ, ಪಿಂಚಣಿ ಸೌಲಭ್ಯ
- ಪ್ರತಿ ತಿಂಗಳು ಕಾರ್ಮಿಕರಿಗೆ 500 ರೂಪಾಯಿ ನಿಂದ ಒಂದು ಸಾವಿರ ರೂಪಾಯಿಗಳನ್ನು ನೀಡಲಾಗುತ್ತದೆ
- ಪ್ರತಿ ತಿಂಗಳು 55 ರಿಂದ 210ಗಳನ್ನು ಹೂಡಿಕೆ ಮಾಡಿದರೆ 3000 ರೂಪಾಯಿಗಳ ಪಿಂಚಣಿಯನ್ನು ಅರವತ್ತು ವರ್ಷದ ನಂತರ ಪಡೆದುಕೊಳ್ಳಲು ಸಾಧ್ಯವಾಗುತ್ತದೆ
ಹೀಗೆ ಈಶ್ರಮ ಕಾರ್ಡನ್ನು ಹೊಂದಿರುವಂತಹ ಸಂಘಟಿತ ವಲಯದ ಕಾರ್ಮಿಕರು ಸಾಕಷ್ಟು ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.
ಖಾತೆಯಲ್ಲಿ ಇರುವಂತಹ ಬ್ಯಾಲೆನ್ಸ್ ಚೆಕ್ ಮಾಡುವ ವಿಧಾನ
ಈ ಶ್ರಮ ಕಾರ್ಡ್ ಹೊಂದಿರುವವರಿಗೆ ಒಂದು ಸಾವಿರ ರೂಪಾಯಿಗಳ ಸಹಾಯವನ್ನು ಸರ್ಕಾರದಿಂದ ನೀಡಲಾಗುತ್ತದೆ. ನಿಮ್ಮ ಖಾತೆಗೆ ಈ ಹಣ ಬಂದಿದೆಯ ಎನ್ನುವುದನ್ನು ಆನ್ಲೈನ್ ಮೂಲಕ ಚೆಕ್ ಮಾಡಿಕೊಳ್ಳಬಹುದಾಗಿದೆ ಇದಕ್ಕಾಗಿ ಮೊದಲು ಈ ಶ್ರಮ ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು.
ಅದರಲ್ಲಿ ಕಾಣುವಂತಹ ಈಶ್ರಮ ಎನ್ನುವ ಆಯ್ಕೆಯನ್ನು ಕ್ಲಿಕ್ ಮಾಡಬೇಕಾಗುತ್ತದೆ ಅದರಲ್ಲಿ ನೀವು ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು. ನಂತರ ಸಲ್ಲಿಸು ಎನ್ನುವುದರ ಮೇಲೆ ಕ್ಲಿಕ್ ಮಾಡಿದಾಗ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದೆಯಾ ಇಲ್ಲವೇ ಎಂಬುದರ ಬಗ್ಗೆ ತಿಳಿದುಕೊಳ್ಳಬಹುದಾಗಿದೆ.
ಈ ಯೋಜನೆಗೆ ಸಂಬಂಧಿಸಿದಂತೆ ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ಕಾರ್ಮಿಕ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ.
ಒಟ್ಟಾರೆ ಕೇಂದ್ರ ಸರ್ಕಾರವು ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಈ ಶ್ರಮ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಅಸಂಘಟಿತ ವಲಯದ ಕಾರ್ಮಿಕರು ಪಡೆದುಕೊಳ್ಳಬಹುದಾಗಿದೆ.
ಕೇವಲ ಕಾರ್ಮಿಕರಲ್ಲದೇ ಅವರ ಕುಟುಂಬವೂ ಕೂಡ ಸರ್ಕಾರದ ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಹಾಗಾಗಿ ಈ ಮಾಹಿತಿಯನ್ನು ಅಸಂಘಟಿತ ವಲಯದ ಎಲ್ಲಾ ಕಾರ್ಮಿಕರಿಗೆ ಶೇರ್ ಮಾಡಿ ಧನ್ಯವಾದಗಳು.